ರಾಜ್ಯದ ರೈತರಿಗೆ ಗುಡ್ ನ್ಯೂಸ್, ‘ರೈತ ಶಕ್ತಿ’ ಸಹಾಯಧನ ಬಿಡುಗಡೆ – ಪ್ರತಿ ಎಕರೆಗೆ 250 ರೂಪಾಯಿ, ಗರಿಷ್ಠ 1250 ಖಾತೆಗೆ ಜಮಾ, ನೋಂದಣಿಗೆ ಸೂಚನೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್, ‘ರೈತ ಶಕ್ತಿ’ ಸಹಾಯಧನ ಬಿಡುಗಡೆ –  ಪ್ರತಿ ಎಕರೆಗೆ 250 ರೂಪಾಯಿ, ಗರಿಷ್ಠ 1250 ಖಾತೆಗೆ ಜಮಾ, ನೋಂದಣಿಗೆ ಸೂಚನೆ

ಕೃಷಿ ಲೋಕ : 2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಟ 5 ಎಕರೆಗೆ 1250 ರೂ. ರವರೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಡೀಸಲ್ ಸಹಾಯಧನಕ್ಕಾಗಿ “ರೈತ ಶಕ್ತಿ” ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾಯಿಸುವಂತೆ ಸೂಚಿಸಲಾಗಿದೆ.

ಸೌಲಭ್ಯ ಪಡೆಯುವ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಫ್ರೂಟ್ಸ್/ FRUITS (Farmers Registration and Unified Beneficiary information System) portal ನಲ್ಲಿನ ನೋಂದಣಿಯಂತೆ ರೈತರ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಟ 5 ಎಕರೆಗೆ 1250 ರೂ.ರವರೆಗೆ ಡೀಸೆಲ್ ಸಹಾಯಧನ ಒದಗಿಸಲಾಗುವುದು.

ಫ್ರೂಟ್ಸ್/FRUITS (Farmers Registration and Unified Beneficiary information System) ಕರ್ನಾಟಕ ಸರ್ಕಾರ ಇ-ಇಲಾಖೆಯ ಪೋರ್ಟಲ್ ಆಗಿದ್ದು, ಕಂದಾಯ ಇಲಾಖೆಯ “ಭೂಮಿ” (Bhoomi) ಪೋರ್ಟಲ್‌ ನೊಂದಿಗೆ ಸಂಯೋಜಿಸಲಾಗಿದ್ದು, ರೈತರ ಭೂ ಹಿಡುವಳಿಯ ವಿವರವನ್ನು ವಿಳಾಸ ಮತ್ತು ಬ್ಯಾಂಕ್ ವಿವರದೊಂದಿಗೆ ನೋಂದಾಯಿಸಿ ರೈತರಿಗೆ ಗುರುತಿನ ಸಂಖ್ಯೆ/ FID (farmer ID) ನೀಡಲಾಗುವುದು.

ಈಗಾಗಲೇ ಸಾಕಷ್ಟು ರೈತರು ಫ್ರೂಟ್ಸ್/FRUITS portal ನಲ್ಲಿ ಕೆಲವು ಸರ್ವೆ ನಂಬರ್/ ಭೂ ಹಿಡುವಳಿಯೊಂದಿಗೆ ನೋಂದಾಯಿಸಿಕೊಂಡಿದ್ದು, ಪ್ರತಿ ಎಕರೆಗೆ ಡೀಸೆಲ್ ಸಹಾಯಧನವನ್ನು ಎಕರೆವಾರು ನೀಡುವುದರಿಂದ ತಮ್ಮ ಉಳಿದ ಎಲ್ಲಾ ಸರ್ವೆ ನಂಬರ್/ ಭೂ ಹಿಡುವಳಿಗಳನ್ನು ಸೇರಿಸುವುದು.
ಫ್ರೂಟ್ಸ್/FRUITS portal ನಲ್ಲಿ ರೈತರ ವಿವರ ನೋಂದಣಿಯಾಗಿರದಿದ್ದಲ್ಲಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಖಾತೆ/ಪಹಣಿ ವಿವರ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಚೇರಿಗಳಲ್ಲಿ ರೈತರು ತಮ್ಮ ಎಲ್ಲಾ ಸರ್ವೆ ನಂಬರ್/ ಭೂ ಹಿಡುವಳಿಗಳನ್ನು ಸೇರಿಸುವುದರೊಂದಿಗೆ ನೋಂದಾಯಿಸಿಕೊಳ್ಳುವುದು.

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ ತೋಟಗಾರಿಕೆ/ ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್/FRUITS portal ನಲ್ಲಿ ನೋಂದಣಿ ಅಗತ್ಯವಾಗಿರುವುದರಿಂದ ರೈತರು ನೋಂದಣಿ ಮಾಡಿಸಬೇಕೆಂದು ಹೇಳಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಕೃಷಿ ಯಂತ್ರೋಪಕರಣ ಬಳಕೆಗೆ ರೈತರನ್ನು ಪ್ರೋತ್ಸಾಹಿಸಲು ಮತ್ತು ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಈ ಹೊಸ ಯೋಜನೆಯನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.

5 ಎಕರೆವರೆಗೆ ರೈತರಿಗೆ ಡಿಸೇಲ್ ಸಬ್ಸಿಡಿ ಪ್ರೋತ್ಸಾಹಧನ ನೀಡಲಾಗುವುದು. ಈ ಯೋಜನೆಗಾಗಿ 400 ಕೋಟಿ ರೂ.ಗಳನ್ನು ಬಜೆಟ್ ನಲ್ಲಿಡಲಾಗಿತ್ತು. ಹೆಚ್ಚುವರಿ ಅನುದಾನ ಅಗತ್ಯ ಕಾರಣಕ್ಕೆ 137 ಕೋಟಿ ರೂ. ನೀಡಲಾಗಿದೆ.

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *