ಹವಾಮಾನ ವರದಿ‌ : ದಿನಾಂಕ 21-03-2022 ಮತ್ತಷ್ಟು ತೀವ್ರಗೊಂಡ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ

ಹವಾಮಾನ ವರದಿ‌ : ದಿನಾಂಕ 21-03-2022  ಮತ್ತಷ್ಟು ತೀವ್ರಗೊಂಡ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ

22.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೃಷಿ ಲೋಕ: ಕೊಡಗು ಹಾಗೂ ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾಹರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಬೀಳುವ ಸಾಧ್ಯತಹೆ ಇದೆ.

ವಾಯುಭಾರ ಕುಸಿತ :

ಈಗಾಗಲೇ ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ- ಈಶಾನ್ಯಕ್ಕೆ ಗಂಟೆಗೆ 12 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಸಂಜೆಯ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಇದು ಮ್ಯಾನ್ಮಾರ್ ಕರಾವಳಿಗೆ ಕಡೆಗೆ ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ.

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *